2024-09-19 05:05:17

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕರ್ನಾಟಕ ವಿಧಾನಸಭೆ ಅಧಿವೇಶನ;ಯಾರಾಗ್ತಾರೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ?

ಬೆಂಗಳೂರು : ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ (ಸೋಮವಾರ) ಜು26ರವರೆಗೆ ನಡೆಯಲಿದೆ. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ನಡೆಯುವ ಮಾತಿನ ಸಮರಕ್ಕೆ ಇಂದಿನಿಂದ ವಿಧಾನಮಂಡಲ ಅಧಿವೇಶನ ವೇದಿಕೆಯಾಗಲಿದೆ.

ಲೋಕಸಭೆ ಚುನಾವಣೆ 2024ರ ಫಲಿತಾಂಶದ ಬಳಿಕ ಮೊದಲ ಬಾರಿಗೆ ವಿಧಾನಮಂಡಲ ಕಲಾಪ ನಡೆಯುತ್ತಿದೆ. ಆದರೆ ಸದನದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಯಾರು? ಎಂಬುದು ಎಲ್ಲರ ಪ್ರಶ್ನೆಯಾಗಿತ್ತು. ಆದರೆ ಇಂದೇ ಜೆಡಿಎಸ್ ಶಾಸಕಾಂಗ ನಾಯಕನ ಹೆಸರು ನಿರ್ಧಾರವಾಗುವುದ್ದನ್ನು ಕಾದುನೋಡಬೇಕಾಗಿದೆ. ಸದ್ಯಕ್ಕೆ ಜಿ ಟಿ ದೇವೇಗೌಡ, ಸುರೇಶ್ ಬಾಬು ಅವರ ಹೆಸರುಗಳು ಚಾಲ್ತಿಯಲ್ಲಿವೆ. ಸುರೇಶ್ ಬಾಬು ಹೆಸರೇ ಅಂತ್ಯಗೊಳ್ಳುವ ಸಾಧ್ಯತೆಯಿದೆ,

ಇನ್ನೂ ಪರಿಷತ್ಗೂ ಇಂದೇ ಜೆಡಿಎಸ್ ಪಕ್ಷದ ನಾಯಕನ ಆಯ್ಕೆಯಾಗಿದೆ. ಪರಿಷತ್ನಲ್ಲಿ ಜೆಡಿಎಸ್ ಮುನ್ನಡೆಸುವ ಜವಾಬ್ದಾರಿ ಎಸ್ ಎಲ್ ಬೋಜೇಗೌಡ ಹೊರಲಿದ್ದಾರ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಆದರೆ ಎರಡೂ ಹೆಸರುಗಳನ್ನು ಕೆಲವೇ ಹೊತ್ತಿನಲ್ಲಿ ಘೋಷಣೆ ಮಾಡುವ ಮೂಲಕ ಈ ಪ್ರಶ್ನೆಗೆ ತೆರೆ ಬೀಳಲಿದೆ.

Post a comment

No Reviews