
ಬೆಂಗಳೂರು : ರಾಷ್ಟ್ರೀಯ ಕಾಳಿದಾಸ ಸಮ್ಮಾನ್ ಪ್ರಶಸ್ತಿಗೆ ಗಂಜೀಫಾ ರಘುಪತಿ ಭಟ್ಟ ಆಯ್ಕೆಯಾಗಿದ್ದಾರೆ. ಜೀವಿತಾವಧಿಯ ಶ್ರೇಷ್ಠತೆ ಆಧಾರದ ಮೇಲೆ ಮಧ್ಯಪ್ರದೇಶ ಸರ್ಕಾರ ಕಾಳಿದಾಸ ಸಮ್ಮಾನ್ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತದೆ.
2023ನೇ ಸಾಲಿನ ರಾಷ್ಟ್ರೀಯ ಕಾಳಿದಾಸ ಸಮ್ಮಾನ್ ಪ್ರಶಸ್ತಿಗೆ ಮಧ್ಯಪ್ರದೇಶ ಸರ್ಕಾರ ಸರ್ವಾನುಮತದಿಂದ ಗಂಜೀಫಾ ರಘುಪತಿ ಭಟ್ಟ ಅವರನ್ನು ಆಯ್ಕೆ ಮಾಡಿದೆ. ಈ ಗೌರವದ ಅಡಿಯಲ್ಲಿ 5 ಲಕ್ಷ ನಗದು ಶಾಲು ಶ್ರೀಫಲಕ ನೀಡಲಾಗುತ್ತದೆ.
ಇದೇ ವರ್ಷ ಡಿಸೆಂಬರ್ 12 ರಂದು ಉಜ್ಜಯಿನಿಯಲ್ಲಿ ನಡೆಯುವ ಸಮಾರಂಭದಲ್ಲಿ ರಘುಪತಿ ಭಟ್ಟರಿಗೆ ಕಾಳಿದಾಸ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಭಟ್ಟರು ಭಾರತೀಯ ಶಾಸ್ತ್ರೀಯ ಚಿತ್ರ ಗಂಜಿಫಾ ರಚನೆಯಲ್ಲಿ ಸುಮಾರು 50 ವರ್ಷ ಸೇವೆ ಸಲ್ಲಿಸಿದ್ದಾರೆ. ಅವರ ಸಾಧನೆಯನ್ನು ಗುರುತಿಸಿದ ಮಧ್ಯಪ್ರದೇಶದ ಸರ್ಕಾರ ಕಾಳಿದಾಸ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.
Poll (Public Option)

Post a comment
Log in to write reviews