2024-09-19 05:02:56

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು

ಮುಂಬೈ :ಕಳೆದ ಎರಡು ದಿನಗಳಿಂದ ನಿಗೂಢವಾಗಿ ಕಾಣೆಯಾಗಿದ್ದ ಯುವತಿಯೊಬ್ಬಳ ಮೃತದೇಹ ರಕ್ತಮಡುವಿನಲ್ಲಿ ಪತ್ತೆಯಾಗಿದ್ದು, ಅದನ್ನು ಬೀದಿನಾಯಿಗಳು ತಿಂದಿರುವ ಘಟನೆ  ಮುಂಬೈನಲ್ಲಿ ನಡೆದಿದೆ.

ಮೃತ ಯುವತಿ 22 ವರ್ಷದ ಯಶಶ್ರೀ ಎಂದು ಗುರುತಿಸಲಾಗಿದ್ದು, ಆಕೆಯ ಜನನಾಂಗ ಮತ್ತು ಎದೆಯ ಭಾಗ ಸೇರಿದಂತೆ ಖಾಸಗಿ ಭಾಗಗಳಗೆ ಬರ್ಬರವಾಗಿ ಇರಿಯಲಾಗಿದೆ.

ಶುಕ್ರವಾರ ರಾತ್ರಿ ಮಹಿಳೆಯ ಮೃತದೇಹ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಬೀದಿ ನಾಯಿಗಳು ದೇಹವನ್ನು ತಿನ್ನುತ್ತಿವೆ ಎಂದು ಪೊಲೀಸರಿಗೆ ಕರೆ ಬಂದಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಹೊರತೆಗೆದಿದ್ದಾರೆ. ಮೃತ ದೇಹದಲ್ಲಿ ಗಾಯಗಳಾಗಿದ್ದು ಎದೆ, ಸೊಂಟ, ಬೆನ್ನು ಮತ್ತು ಖಾಸಗಿ ಭಾಗಗಳಲ್ಲಿ ಹಲವಾರು ಇರಿತದ ಗಾಯಗಳು ಕಂಡುಬಂದಿದೆ ಮತ್ತು ಆಕೆಯ ಮೂಳೆಗಳು ಮುರಿದಿವೆ ಎಂದು ಪೊಲೀಸರು ಹೇಳಿದ್ದಾರೆ.

ಯಶಶ್ರಿ ಶಿಂಧೆ ಮೃತ ದೇಹವು ಮುಂಬೈನ ಉರಾನ್ ತಾಲೂಕಿನಲ್ಲಿ ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಆಕೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಶಕ್ಕೆ ಪಡೆದಿದ್ದಾರೆ. ದಾವೂದ್ ಶೇಖ್ ಎಂಬಾತ ಆಕೆಯನ್ನು ಕೊಂದಿದ್ದಾನೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.

 

Post a comment

No Reviews