2024-09-19 04:35:28

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚಾಕು ಇರಿತ : ಯುವಕ ಸಾವು

ಬೆಳಗಾವಿ: ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದ ಯುವಕನನ್ನು ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ನಡೆದಿದೆ. 
ಬಸವರಾಜ್ ಮುದ್ದಣ್ಣವರ(23) ಕೊಲೆಯಾದ ವ್ಯಕ್ತಿ. ಈತ ಎಂಎಸ್‌ಡಬ್ಲ್ಯು ವ್ಯಾಸಂಗ ಮಾಡುತ್ತಿದ್ದ. ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿಯಲ್ಲಿ ಮಂಗಳವಾರ ರಾತ್ರಿ ಸ್ನೇಹಿತನ ಬರ್ತ್‌ಡೇ ಪಾರ್ಟಿಗೆ ಬಸವರಾಜ್ ಹೋಗಿದ್ದ. ಈ ವೇಳೆಯಲ್ಲಿ ನಡೆದ ಗಲಾಟೆಯಲ್ಲಿ ಬಸವರಾಜ್‌ ಹೊಟ್ಟೆ, ಬೆನ್ನಿಗೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು ಪ್ರಕರಣ ದಾಖಲಾಗಿದೆ.

Post a comment

No Reviews