2024-09-19 04:43:52

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಿಸಿಲ ತಾಪಕ್ಕೆ ಕಾರ್ಮಿಕ ಬಲಿ

ಬಿಸಿಲಿನ ತಾಪಕ್ಕೆ ನರೇಗಾ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಶಂಕರ್‌ ನರೇಗಾ ಕೆಲಸದ ನಿಮಿತ್ತ ಅರಣ್ಯ ವಲಯದಲ್ಲಿ ಗುಂಡಿ ತೊಡುವ ಕೆಲಸಕ್ಕೆ ಹೊಗಿದ್ದರು. ಕೆಲಸ ಮುಗಿಸಿ ಊಟ ಮಾಡಿ ವಿಶ್ರಾಂತಿ ತೆಗೆದುಕೊಳ್ಳಲು ಹೋದಾಗ ಹೃದಯಾಘಾತದಿಂದ ಮೂರ್ಛೆ ತಪ್ಪಿ ಕುಸಿದಿದ್ದಾರೆ.

ಮಲ್ಲಪ್ಪ ಶಂಕರ್‌ ಅವರನ್ನು ಸ್ಥಳೀಯರು ಕೂಡಲೆ ನಗರದ ಪಾಟೀಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರೀಕ್ಷಿಸಿದ ವೈದ್ಯರು ಕಾರ್ಮಿಕ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. ನಂತರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಸ್ಥಳಕ್ಕೆ ಬಸವಕಲ್ಯಾಣ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ನರೇಗಾ ಸಹಾಯಕ ನಿರ್ದೇಶಕರು ಭೇಟಿ ನೀಡಿ, ಸರ್ಕಾರದಿಂದ ಸಿಗಬೆಕಾದ ಸವಲತ್ತುಗಳನ್ನು ದೊರಕಿಸಿಕೊಡುವ ಪ್ರಯತ್ನ ಮಾಡುತ್ತೇವೆ ಎಂದು ಕುಟುಂಬಸ್ಥರಿಗೆ ಭರವಸೆಯ ಧೈರ್ಯ ನೀಡಿದ್ದಾರೆ.

Post a comment

No Reviews