2024-09-20 02:41:33

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಾಕಿಂಗ್ ವೇಳೆ MBBS ವಿದ್ಯಾರ್ಥಿಗೆ ಹೃದಯಾಘಾತ

ಶಿವಮೊಗ್ಗ: ವಾಕಿಂಗ್ ಮಾಡುತ್ತಿದ್ದ MBBS ವಿದ್ಯಾರ್ಥಿ ಸ್ಥಳದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಸಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿ ಪೃಥ್ವಿರಾಜ್ (20) ಮೃತಪಟ್ಟವರು ಎಂದು ತಿಳಿದು ಬಂದಿದೆ. ಬುಧವಾರ ಸಂಜೆ ನಗರದ ಪ್ರವಾಸಿ ಮಂದಿರದ ಬಳಿ ವಾಕಿಂಗ್ ಮಾಡುತಿದ್ದ ಪೃಥ್ವಿರಾಜ್‌ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ಮೋಹನ್ ಎಂಬುವರು ಪ್ರವಾಸಿ ಮಂದಿರ ಮುಂಭಾಗದಲ್ಲಿಯೇ ಇರುವ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

ಆದರೆ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯಲ್ಲಿ ವೈದ್ಯರು ಹೇಳಿದ್ದಾರೆ. ಪೃಥ್ವಿರಾಜ್ ಅವರ ತಂದೆ ಮುತ್ತಣ್ಣ ಅವರು ನಗರದಲ್ಲಿ ಔಷಧ ಸಗಟು ವ್ಯಾಪಾರ ಮಾಡಿಕೊಂಡಿದ್ದಾರೆ. ಪೃಥ್ವಿರಾಜ್ ನಿಧನಕ್ಕೆ ರೋಟರಿ ಕ್ಲಬ್ ಹಾಗೂ ಔಷಧ ವ್ಯಾಪಾರಿಗಳ ಸಂಘದ ಸದಸ್ಯರು ಸಂತಾಪ ಸೂಚಿಸಿದ್ದಾರೆ.

Post a comment

No Reviews