2024-09-19 05:03:53

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಂಸದ ಡಾ.ಕೆ. ಸುಧಾಕರ್‌ ಅಭಿನಂದನಾ ಸಮಾರಂಭದಲ್ಲಿ ಮದ್ಯ ವಿತರಣೆ 

ನೆಲಮಂಗಲ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ನೂತನ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಅವರಿಗೆ ನಗರದ ಹೊರವಲಯದಲ್ಲಿ  ಅಭಿನಂದನಾ ಸಮಾರಂಭ ಏರ್ಪಡಿಸಿ ಕಾರ್ಯಕರ್ತರಿಗೆ ಬಾಡೂಟದೊಂದಿಗೆ ಮದ್ಯ ವಿತರಣೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಪಕ್ಷದ ಗೆಲುವಿಗೆ ದುಡಿದ ಕಾರ್ಯಕರ್ತರು ಮತ್ತು ಮುಖಂಡರಿಗೆ ಅಭಿನಂದನೆ ಸಲ್ಲಿಸಲು ಬಾವಿಕೆರೆಯ ಜಮೀನಿನಲ್ಲಿ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿತ್ತು, ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ ಅವರು ಈ ಕುರಿತು ನೆಲಮಂಗಲ ಡಿವೈಎಸ್‌ಪಿಗೆ ಬರೆದ ಮನವಿ ಪತ್ರದಲ್ಲಿ ಕಾರ್ಯಕ್ರಮದಲ್ಲಿ ಊಟ ಹಾಗು ಮದ್ಯದ ವ್ಯವಸ್ಥೆ ಇರಲಿದ್ದು  ಬಂದೋಬಸ್ತ್ ಒದಗಿಸುವಂತೆ ಮನವಿ ಮಾಡಿದ್ದರು. ಪೊಲೀಸ್ ಇಲಾಖೆಯ ಅನುಮತಿ ಮೇರೆಗೆ ಅಬಕಾರಿ ಇಲಾಖೆ ಒಂದು ದಿನದ ಸಿಎಲ್ -5 ಅನುಮತಿ ನೀಡಿತ್ತು ಎಂದು ತಿಳಿದುಬಂದಿದೆ.
ಅಭಿನಂದನಾ ಸಮಾರಂಭದಲ್ಲಿ ಸುಮಾರು 10 ಸಾವಿರ ಜನರಿಗೆ ಬಾಡೂಟ ಹಾಕಲಾಗಿದೆ. ಇದರ ಜೊತೆಗೆ, ಅಬಕಾರಿ ಇಲಾಖೆಯ ಮಾಹಿತಿ ಪ್ರಕಾರ 130 ಕೇಸ್ ಬಿಯರ್ ಸೇರಿದಂತೆ ವಿವಿಧ ಬಗೆಯ ಮದ್ಯಗಳ ವಿತರಣೆ ನಡೆಸಲಾಗಿದೆ. ಆದರೆ ಲಭ್ಯವಾದ ಮಾಹಿತಿ ಪ್ರಕಾರ, 650 ಕೇಸ್ ಬಿಯರ್ 450 ಕೇಸ್ ವಿವಿಧ ಬಗೆಯ ಮದ್ಯದ ಬಾಟಲಿಗಳು ವಿತರಣೆಯಾಗಿವೆ.
ಮದ್ಯದ ಬಾಟಲಿಗಾಗಿ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಮುಗಿಬಿದ್ದಿರುವ  ವಿಡಿಯೋ  ಸೋಶಿಯಲ್‌ ಮೀಡಿಯಾಗಳಲ್ಲಿ ವೈರಲ್ ಆಗಿದ್ದು ವಿಶೇಷವಾಗಿ ಯುವಕರು, ವೃದ್ಧರು ಸರದಿ ಸಾಲಿನಲ್ಲಿ ನಿಂತು ಮದ್ಯದ ಬಾಟಲಿಗಳನ್ನು ಪಡೆದುಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ.

Post a comment

No Reviews