2024-09-19 09:16:12

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜ್ಯದ ರೈತರ ಪರ ಸಂಸದ ಯದುವೀರ್ ಧ್ವನಿ : ಕಾಳುಮೆಣಸಿಗೆ ಜಿಎಸ್ಟಿ ವಿನಾಯಿತಿ ಕೋರಿ ನಿರ್ಮಲಾ ಸೀತಾರಾಮನ್ಗೆ ಮನವಿ

ಬೆಂಗಳೂರು, ಸೆ.17:ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ರೈತರ ಪ್ರಮುಖ ಸಮಸ್ಯೆಯಾದ ಕರಿಮೆಣಸಿಗೆ ಜಿಎಸ್‌ಟಿ ವಿನಾಯಿತಿ ಕುರಿತು ಚರ್ಚಿಸಲು ಇಂದು ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದರು.

ಕರಿಮೆಣಸು ಮತ್ತು ಏಲಕ್ಕಿಯನ್ನು ಸರಕು ಮತ್ತು ಸೇವಾ ತೆರಿಗೆ(GST) ವ್ಯಾಪ್ತಿಗೆ ತರುವಂತೆ ಅಧಿಕಾರಿಗಳು ರೈತರು, ಬೆಳೆಗಾರರನ್ನು ಒತ್ತಾಯಪಡಿಸುತ್ತಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಕೆಲದಿನಗಳ ಹಿಂದೆ ಕೊಡಗು ಪ್ಲಾಂಟರ್ಸ್ ಕ್ಲಬ್ ಕೊಡಗು ಮೈಸೂರು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್(Yaduveer Wadiyar) ಅವರನ್ನು ಭೇಟಿ ಮಾಡಿ ಇದನ್ನು ತಡೆಯುವಂತೆ ಮನವಿ ಸಲ್ಲಿಸಿದ್ದರು. ಅದರಂತೆ ಇಂದು(ಸೆ.17) ಯದುವೀರ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು,  ‘ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ರೈತರ ಪ್ರಮುಖ ಸಮಸ್ಯೆಯಾದ ಕರಿಮೆಣಸಿಗೆ ಜಿಎಸ್‌ಟಿ ವಿನಾಯಿತಿ ಕುರಿತು ಚರ್ಚಿಸಲು ಇಂದು ಸಚಿವೆ ನಿರ್ಮಲಾ ಸೀತಾರಾಮನ್  ಅವರನ್ನು ಭೇಟಿ ಮಾಡಿ, ರೈತರ ಕೃಷಿ ಉತ್ಪನ್ನ ವರ್ಗೀಕರಣ ಮತ್ತು ರಫ್ತುಗಳ ಮೇಲೆ ಆಗುವಂತಹ ಪರಿಣಾಮಗಳನ್ನು ಉಲ್ಲೇಖಿಸಿ ವಿನಾಯಿತಿ ಮುಂದುವರಿಕೆಗೆ ವಿನಂತಿಸಲಾಗಿದೆ ಎಂದಿದ್ದಾರೆ.

ಇನ್ನು ಈ ಕುರಿತು ಮಾತನಾಡಿದ್ದ ಸಿಪಿಎ ಅಧ್ಯಕ್ಷ ನಂದಾ ಬೆಳ್ಳಪ್ಪ, ‘ ಜಿಎಸ್​ಟಿ ಅಧಿಕಾರಿಗಳು ಜಿಲ್ಲೆಯ ರೈತರು ಮತ್ತು ಬೆಳೆಗಾರರಿಗೆ ಕರಿಮೆಣಸು ಜಿಎಸ್​ಟಿ ವ್ಯಾಪ್ತಿಯಲ್ಲಿ ಬರುತ್ತದೆ. ಆದ್ದರಿಂದ ತಮ್ಮನ್ನು ಜಿಎಸ್​ಟಿ ಅಡಿಯಲ್ಲಿ ನೊಂದಾಯಿಸಿಕೊಳ್ಳುವಂತೆ ಒತ್ತಾಯಿಸಿ ನೋಟಿಸುಗಳನ್ನು ನೀಡುತ್ತಿದ್ದಾರೆ. ಹಸಿ ಕಾಳುಮೆಣಸು ಜಿಎಸ್​ಟಿ ವ್ಯಾಪ್ತಿಗೆ ಬರುವುದಿಲ್ಲ. ಆದರೆ, ಅದನ್ನು ಒಣಗಿಸಿ ಕರಿಮೆಣಸಿಗೆ ಪರಿವರ್ತಿಸಿದರೆ ಅದಕ್ಕೆ ಜಿ.ಎಸ್.ಟಿ ಬೀಳುತ್ತದೆ. ಇದು ಯಾವ ರೀತಿಯ ನ್ಯಾಯ ಎಂದು ಪ್ರಶ್ನಿಸಿದ್ದರು. ಇದೀಗ ಸಂಸದ ಯದುವೀರ್ ಅವರು ಕರ್ನಾಟಕದ ರೈತರ ಪರ ದನಿ ಎತ್ತಿದ್ದಾರೆ.

Post a comment

No Reviews