2024-09-19 04:53:28

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸೆ.9ಕ್ಕೆ ಮುಡಾ ಪ್ರಕರಣ ವಿಚಾರಣೆ ಮುಂದೂಡಿಕೆ: ಸಿಎಂ ಸಿದ್ದರಾಮಯ್ಯಗೆ ರಿಲೀಫ್

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್​ ಮತ್ತೆ ಮುಂದೂಡಿದೆ

ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ 2ನೇ ಬಾರಿಗೆ ಮುಂದೂಡಿಕೆಯಾಗಿದೆ. ಗಣೇಶ ಹಬ್ಬದ ಬಳಿಕ ಸೆಪ್ಟೆಂಬರ್‌ 9 ರಂದು ಮಧ್ಯಾಹ್ನ 2:30ಕ್ಕೆ ಹೈಕೋರ್ಟ್‌ ವಿಚಾರಣೆ ನಡೆಸಲಿದೆ.

ಇಂದು ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಕೆ ಜಿ ರಾಘವನ್‌ ವಾದ ಮಂಡಿಸಿದ್ದಾರೆ. “ಸಣ್ಣ ಪ್ರಮಾಣದ ಅನುಮಾನಗಳಿದ್ದರೂ ತನಿಖೆಗೆ ಅನುಮತಿಸಬೇಕು. ಅದನ್ನು ಕಡೆಗಣಿಸಬಾರದು” ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಬಳಿ ಮನವಿ ಮಾಡಿದ್ದಾರೆ.

1998-99ರವರೆಗೆ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿದ್ದರು. 2004-05ರವರಗೆಗೆ ಮತ್ತೆ ಡಿಸಿಎಂ ಆಗಿದ್ದರು. 2013-18ರವರೆಗೆ ಸಿಎಂ ಆಗಿದ್ದರು. ಈಗ 2023ರಿಂದ ಸಿಎಂ ಆಗಿದ್ದಾರೆ. ಇಷ್ಟು ಸಮಯದವರೆಗೂ ಸಿಎಂ ಗಮನಕ್ಕೆ ಬಂದಿಲ್ಲವೇ ಎಂದು ಕೆ ಜಿ ರಾಘವನ್‌ ಪ್ರಶ್ನಿಸಿದ್ದಾರೆ.

ವಿಚಾರಣೆಯನ್ನು ಸೆಪ್ಟೆಂಬರ್ 9ರ ಮಧ್ಯಾಹ್ನ 2:30 ಗಂಟೆಗೆ ಮುಂದೂಡಿಕೆ ಮಾಡಿರುವ ಪೀಠವು, ಸೆಪ್ಟೆಂಬರ್ 12ರ ಒಳಗಾಗಿ ಈ ಪ್ರಕರಣದ ಎಲ್ಲಾ ವಾದಗಳು ಮುಗಿಯಬೇಕು. ಇನ್ನಷ್ಟು ವಿಳಂಬ ಸರಿಯಲ್ಲ ಎಂದು ತಿಳಿಸಿದೆ.

Post a comment

No Reviews