2024-09-19 04:31:20

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೈಸೂರಿನ ಮಾತದಾರರು ಸ್ಯಾಡಿಸ್ಟ್‌ಗಳು :ಎಂ.ಲಕ್ಷ್ಮಣ್

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಸೋತ ಕಾರಣ ಪರಾಜಿತ ಅಭ್ಯರ್ಥಿ ಎಂ.ಲಕ್ಷ್ಮಣ್ ಕ್ಷೇತ್ರದ ಮತದಾರರಿಗೆ ಸ್ಯಾಡಿಸ್ಟ್ ಎಂದು ಬೈದಿದ್ದಾರೆ. ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಎಂ.ಲಕ್ಷ್ಮಣ್ ಮೈಸೂರಿನ ಮತದಾರರು ನನ್ನನ್ನು ಸೋಲಿಸಿದ್ದಾರೆ. ಈ ಬಗ್ಗೆ ನನಗೆ ಬೇಜಾರಿಲ್ಲ, ಆದರೆ ಆದರೆ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಯಾವ ತಪ್ಪು ಮಾಡಿದ್ದಾರೆ. ಮೈಸೂರಿನವರೆ ಆದ ಅವರಿಗೆ ಜಿಲ್ಲೆಯ ಮತದಾರರು ಎಷ್ಟು ಬಾರಿ ಅಪಮಾನ ಮಾಡುತ್ತೀರಿ ಎಂದು ಬೇಸರ ವ್ಯಕ್ತಪಡಿಸಿದರು. ಈ ಹಿಂದೆ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಜಿಲ್ಲೆಗೆ ಐದು ರೂಪಾಯಿಯಾದ್ರೂ ಕೊಟ್ಟಿದ್ದರಾ?. ಸಿದ್ದರಾಮಯ್ಯ ಅವರು ಜಯದೇವ ಆಸ್ಪತ್ರೆ ಸೇರಿದಂತೆ ಮೈಸೂರಿಗೆ ಎಷ್ಟು ಕೊಡುಗೆ ಕೊಟ್ಟಿದ್ದಾರೆ. ಆದರೆ, ಸಾಹೇಬರು ಯಾವುದನ್ನೂ ಹೇಳಿಕೊಳ್ಳುವುದಿಲ್ಲ. ಸಿದ್ದರಾಮಯ್ಯ ಅವರಂಥ ಕ್ಲೀನ್ ಇಮೇಜ್ ಇರುವ ಸಿಎಂ ದೇಶದಲ್ಲಿ ಬೇರೆ ಎಲ್ಲಿಯಾದರೂ ಇದ್ದಾರ? ಎಂದು ಕೇಳಿದರು. ಆದ್ರೆ ಮೈಸೂರಿನ ಜನತೆ ಸಿದ್ದರಾಮಯ್ಯ ಅವರನ್ನು ಅರ್ಥ ಮಾಡಿಕೊಳ್ಳದೆ ಅವರಿಗೆ ಇನ್ನೂ ಎಷ್ಟು ಬಾರಿ ನೋವು ಕೊಡುತ್ತೀರಾ ? ಇಷ್ಟರ ಮಟ್ಟಿಗೆ ಸ್ಯಾಡಿಸ್ಟಿಕ್ ನೇಚರ್ ಇದ್ದರೆ ಹೇಗೆ ಎಂದು ಮೈಸೂರು ಜಿಲ್ಲೆಯ ಮತದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Post a comment

No Reviews