2024-09-19 05:07:23

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸರ್ಕಾರದ ಮೇಲೆ ಜನರಿಗೆ ಭಾರೀ ವಿಶ್ವಾಸ: ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಜೂನ್‌ 27) ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದರು.
ಹೊಸ ಸರ್ಕಾರದ ಮುಂದಿನ 5 ವರ್ಷಗಳ ಮಾರ್ಗಸೂಚಿಯ ರೂಪುರೇಷೆಗಳನ್ನು ಮಂಡಿಸಿದ ದ್ರೌಪದಿ ಮುರ್ಮು ಅವರು, 18ನೇ ಲೋಕಸಭೆಗೆ ಹೊಸದಾಗಿ ಆಯ್ಕೆಯಾದ ಎಲ್ಲಾ ಸಂಸದರನ್ನು ಅಭಿನಂದಿಸಿದರು. ಜೊತೆಗೆ ಲೋಕಸಭೆಯ ಸ್ಪೀಕರ್ ಆಗಿ ಮರು ಆಯ್ಕೆಗೊಂಡ ಓಂ ಬಿರ್ಲಾ ಅವರಿಗೂ ಅಭಿನಂದನೆ ಸಲ್ಲಿಸಿದರು.
ಬಳಿಕ ಮಾತನಾಡಿದ ದ್ರೌಪದಿ ಮುರ್ಮು ಅವರು, ಭಾರತದ ಜನರು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಿರುವುದನ್ನು ಜಗತ್ತು ನೋಡುತ್ತಿದೆ ಎಂದು ಹೇಳಿದ್ದಲ್ಲದೇ, ಆರು ದಶಕಗಳ ನಂತರ ಇದು ಸಾಧ್ಯವಾಗಿದೆ. ಇಂತಹ ಸಮಯದಲ್ಲಿ, ಭಾರತದ ಜನರ ಆಕಾಂಕ್ಷೆಗಳು ಅತ್ಯುನ್ನತವಾಗಿವೆ. ಜನರು ಮೂರನೇ ಬಾರಿಗೆ ನಮ್ಮ ಸರ್ಕಾರದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮ್ಮ ಸರ್ಕಾರ ಮಾತ್ರ ಅವರ ಆಶೋತ್ತರಗಳನ್ನು ಈಡೇರಿಸಬಲ್ಲದು ಎಂಬ ವಿಶ್ವಾಸವಿದೆ ಎಂದು ಹೇಳಿದರು.
ನಾನು ಚುನಾವಣಾ ಆಯೋಗವನ್ನು ದೇಶದ ಜನತೆಯ ಪರವಾಗಿ ಅಭಿನಂದಿಸುತ್ತೇನೆ. ಈ ಭಾರಿ ದೇಶದಲ್ಲಿ ವಿಶ್ವದಲ್ಲೇ ಅತಿ ದೊಡ್ಡ ಚುನಾವಣೆ ನಡೆದಿತ್ತು. ಇದರಲ್ಲಿ ಮಹಿಳೆಯರೂ ಉತ್ಸಾಹದಿಂದ ಪಾಲ್ಗೊಂಡಿದ್ದರು. ಕಾಶ್ಮೀರದ ಜನರು ಸಹ ಉತ್ಸಾಹದಿಂದ ಭಾಗವಹಿಸಿದ ಚಿತ್ರಣ ಕಂಡು ಬಂದಿದೆ. ಪ್ರಥಮ ಬಾರಿಗೆ ಮನೆಯಲ್ಲೇ ಮತದಾನ ನಡೆಸಲಾಗಿದೆ. ಇದನ್ನು ನಾನು ಅಭಿನಂದಿಸುತ್ತೇನೆ. 2024 ರ ಚುನಾವಣೆ ಇಂದು ಪ್ರಪಂಚದಾದ್ಯಂತ ಚರ್ಚೆಯಾಗುತ್ತಿವೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

Post a comment

No Reviews