2024-09-19 04:41:50

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪೆಟ್ರೋಲ್ ಎರಚಿ ಬೆಂಕಿ: ಮೂವರು ಸ್ಥಿತಿ ಗಂಭೀರ.

ವಿಜಯಪುರ: ಪ್ರೇಮ ಪ್ರಕರಣವೊಂದರಲ್ಲಿ ಪ್ರೇಮಿಗಳಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ, ಮರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮುದ್ದೇಬಿಹಾಳದಲ್ಲಿ ನಡೆದಿದೆ.
ಇದರ ಪರಿಣಾಮ ಪ್ರೀತಿಸುತ್ತಿದ್ದ ಯುವಕ ಮತ್ತು ಪ್ರಿಯತಮೆಯ ಕುಟುಂಬದ ಮೂವರು ಸೇರಿ ನಾಲ್ವರಿಗೆ ಸುಟ್ಟ ಗಾಯಗಳಾಗಿದೆ. ಇದರಲ್ಲಿ ಪ್ರೇಮಿ ಸೇರಿ ಮೂವರ ಸ್ಥಿತಿ ಗಂಭಿರವಾಗಿದೆ.
ಘಟನೆಯಲ್ಲಿ ಪ್ರೀತಿಸುತಿದ್ದ ಯುವಕ  ಢವಳಗಿ ಗ್ರಾಮದ ರಾಹುಲ್ ರಾಮನಗೌಡರ ತಲೆಗೆ ಭಾರೀ ಪೆಟ್ಟಾಗಿದ್ದು, ದೇಹದ ಶೇ.80ರಷ್ಟು ಭಾಗ ಸುಟ್ಟುಹೋಗಿದೆ, ಸದ್ಯ ಆತ ಜಿಲ್ಲಾಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಿಯತಮೆ ಐಶ್ವರ್ಯ, ಅವರ ಚಿಕ್ಕಪ್ಪ,  ಚಿಕ್ಕಮ್ಮ ಸೀಮಾ ,ಕೆಲಸಗಾರ ನೀಲಕಂಠ, ಹಾಗೂ ಹರನಾಳ ಅವರಿಗೂ ಸುಟ್ಟ ಗಾಯಗಳಾಗಿವೆ.
ಘಟನೆ ಕುರಿತು ಎರಡೂ ಕಡೆಯವರಿಂದ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಬಸವನ ಬಾಗೇವಾಡಿ ಡಿಎಸ್ಪಿ ಬಾಳಪ್ಪ ನಂದಗಾಂವ, ಸಿಪಿಐ ಮಲ್ಲಿಕಾರ್ಜುನ ತುಳಸೀಗೇರಿ, ಭೇಟಿ ನೀಡಿ ತನಿಖೆ ನಡೆಸುತಿದ್ದಾರೆ.
ಈ ವಿಷಯದ ಸಲುವಾಗಿ ವಿಜಯಪುರದಿಂದ ಆಗಮಿಸಿದ್ದ ವಿಶೇಷ ತಂಡ ಘಟನಾ ಸ್ಥಳದಲ್ಲಿನ ಬೆರಳಚ್ಚು ಸೇರಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಈ ಘಟನೆಯಲ್ಲಿ ಯಾರು ಪೆಟ್ರೋಲ್ ಎರಚಿ ಯಾರ ಹತ್ಯೆಗೆ ಯತ್ನಿಸಿದರು ಅನ್ನೋದು ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.
ಕಳೆದ 5-6 ವರ್ಷಗಳಿಂದ ಐಶ್ವರ್ಯಾ ಮತ್ತು ರಾಹುಲ್  ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಕಳೆದ ಒಂದು ವರ್ಷದ ಹಿಂದೆ ಐಶ್ವರ್ಯ ರಾಹುಲ್‌ ನೊಂದಿಗೆ ಪ್ರೀತಿಯನ್ನು ನಿರಾಕರಿಸಿದ್ದಳು. ಇದರಿಂದ ರಾಹುಲ್ ಕುಪಿತಗೊಂಡಿದ್ದು, ಈ ಘಟನೆಗೆ ಕಾರಣ ಎಂದು ಸದ್ಯಕ್ಕೆ ತಿಳಿದುಬಂದಿರುವ ಮಾಹಿತಿ.

Post a comment

No Reviews