
ಪ್ರಜ್ವಲ್ ರೇವಣ್ಣರ ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆಶಿವಕುಮಾರ್ ಕೈವಾಡ ಇದೆ ಎಂದು ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದ್ದರು.
ಇಂದು ಸಹ ಪ್ರಜ್ವಲ್ ಪ್ರಕರಣದ ಪೆನ್ ಡ್ರೈವ್ ಹಂಚಿಕೆ ಮಾಡಿರುವವರ ವಿರುದ್ದ ಜೆ ಡಿ ಎಸ್ ಕಾರ್ಯಕರ್ತರು ಕಾನೂನು ಕ್ರಮಕ್ಕೆ ಒತ್ತಾಯಿಸಿ ನಾಗಮಂಗಲದಲ್ಲಿ ಟೌನ್ ಪೊಲೀಸ್ ಠಾಣೆಗೆ ಬೀಗ ಜಡಿದಿದ್ದಾರೆ. ಹಾಗೆಯೇ ಠಾಣೆ ಮುಂದೆ ಪ್ರತಿಭಟನೆಯನ್ನು ಸಹ ನಡೆಸಿದ್ದಾರೆ. ಮಾಜಿ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆಯಲ್ಲಿ ಡಿಸಿಎಂ ಡಿ ಕೆಶಿವಕುಮಾರ್ ಹಾಗೂ ಶಿವರಾಮೇಗೌಡ ವಿರುದ್ದ ಕಾರ್ಯಕರ್ತರು ದಿಕ್ಕಾರ ಕೂಗಿದ್ದಾರೆ.
Poll (Public Option)

Post a comment
Log in to write reviews