
ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಅಶೋಕ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್ ವೈ ವಿರುದ್ಧ ದ್ವೇಷದ ರಾಜಕಾರಣ ಮಾಡ್ತಿದ್ದಾರೆ. ಕೋರ್ಟ್ ಈ ವಿಚಾರವಾಗಿ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಚುನಾವಣೆ ಆದ ಕೂಡಲೇ ನೋಟಿಸ್ ಕೊಟ್ಟಿದ್ದಾರೆ. ಇದು ಪಕ್ಕಾ ದ್ವೇಷದ ರಾಜಕಾರಣ. ಇದಕ್ಕೆ ಪೂರಕವಾಗಿ ನಮ್ಮನ್ನ ಕೋರ್ಟ್ಗೆ ಕರೆಸಿದ್ರಿ ಎಂದು ಡಿ.ಕೆ ಶಿವಕುಮಾರ್ ಮಾತಾಡಿದ್ದಾರೆ. ಇಂತಹ ದ್ವೇಷದ ರಾಜಕಾರಣ ಸರಿಯಲ್ಲ ಎಂದು ಅವರು ಕಿಡಿಕಾರಿದ್ದಾರೆ.
ತಮಿಳುನಾಡಿನಲ್ಲಿ ಇಂತಹ ದ್ವೇಷದ ರಾಜಕೀಯ ಇತ್ತು. ಈಗ ಕರ್ನಾಟಕಕ್ಕೂ ಇದು ಬಂದಿದೆ. ಪರಮೇಶ್ವರ್ ಕೂಡಾ ಬಿಎಸ್ ವೈ ವಿರುದ್ಧ ದೂರು ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಿದ್ದರು. ಚುನಾವಣೆ ಆದ ಮೇಲೆ ಇವರು ನೊಟೀಸ್ ಕೊಟ್ಟು ದ್ವೇಷದ ರಾಜಕೀಯ ಮಾಡ್ತಿದ್ದಾರೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.
Poll (Public Option)

Post a comment
Log in to write reviews