
ಬೆಂಗಳೂರು: ಪ್ರಜ್ವಲ್ ರೇವಣ್ಣ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಎಸ್ ಐಟಿ ಅಧಿಕಾರಿಗಳು ಬಂಧಿಸುತ್ತಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ವಾರೆಂಟ್ ಇರುವುದರಿಂದ ಪ್ರಜ್ವಲ್ ಅವರು ಬೆಂಗಳೂರಿಗೆ ಬರುತ್ತಿದ್ದಂತೆ ಬಂಧಿಸಲಾಗುತ್ತದೆ. ಎಸ್ ಐಟಿಯವರು ಅದನ್ನು ಗಮನಿಸುತ್ತಾರೆ. ಅವರ ವಿರುದ್ಧ ವಾರೆಂಟ್ ಇರುವುದರಿಂದ ಬಂಧಿಸಬೇಕು. ಈ ಸಂಬಂಧ ಎಲ್ಲಾ ರೀತಿಯಲ್ಲೂ ಸೂಕ್ತ ಕ್ರಮವನ್ನು ಅಧಿಕಾರಿಗಳು ತೆಗೆದುಕೊಳ್ಳಲಿದ್ದಾರೆ. ವಾರೆಂಟ್ ಜಾರಿಯಾಗಿರುವುದರಿಂದ ಬಂಧನವಾಗುತ್ತದೆ. ವಿಮಾನ ನಿಲ್ದಾಣಕ್ಕೆ ಬಂದ ಕೂಡಲೇ ಪ್ರಕ್ರಿಯೆಗಳು ನಡೆಯುತ್ತದೆ ಎಂದರು.
Poll (Public Option)

Post a comment
Log in to write reviews