2024-09-19 04:35:31

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರೇಣುಕಾಸ್ವಾಮಿ ಹತ್ಯೆ, ನಟ ಚಿಕ್ಕಣ್ಣನ ವಿಚಾರಣೆಗೆ ನೋಟಿಸ್!

ಬೆಂಗಳೂರು: ಕೊಲೆ ಆರೋಪಿ ದರ್ಶನ್‌ ಮತ್ತವರ ಗ್ಯಾಂಗ್‌ ನಿಂದ ಹತ್ಯೆಯಾದ ರೇಣುಕಾಸ್ವಾಮಿಯನ್ನು ಕೂಡಿಹಾಕಿದ್ದ ಶೇಡ್‌ ಗೆ ದರ್ಶನ್‌ ತೆರಳುವ ಮೊದಲು, ತನ್ನ ನೆಚ್ಚಿನ ಗೆಳೆಯರೊಂದಿಗೆ ಪಾರ್ಟಿ ಮಾಡಿದ್ದಾರೆ. ಆ ಪಾರ್ಟಿಯಲ್ಲಿ ಹಾಸ್ಯನಟ ಚಿಕ್ಕಣ್ಣ ಕೂಡ ಭಾಗಿಯಾಗಿದ್ದರು ಎಂಬ ಮಾಹಿತಿ ಇದೀಗ ಪೊಲೀಸರಿಗೆ ತಿಳಿದುಬಂದಿದೆ. ಈ ಕುರಿತು ಚಿಕ್ಕಣ್ಣ ಹಾಗು ಪಾರ್ಟಿಯಲ್ಲಿ ಭಾಗಿಯಾಗಿದ್ದ ಕೆಲವರನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಈ ಪ್ರಕರಣದಲ್ಲಿ ಮೊದಲಿನಿಂದಲೂ ತನಿಖೆ ನಡೆಸುತ್ತಿರುವ ಅನ್ನಪೂರ್ಣೇಶ್ವರಿನಗರ ಠಾಣೆಯ ಪೊಲೀಸರೇ ಇದೀಗ ಚಿಕ್ಕಣ್ಣನಿಗೂ ಇಂದು ಸಂಜೆಯೇ ನೋಟಿಸ್‌ ನೀಡಲಿದ್ದಾರೆ. ಬಹುಷಃ ನಾಳೆ ಬೆಳಗ್ಗೆ ಅಥವಾ ಇಂದು ರಾತ್ರಿ ಚಿಕ್ಕಣ್ಣ ವಿಚಾರಣೆಗೆ ಒಳಗಾಗಬಹುದು ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

Post a comment

No Reviews