2024-09-19 05:00:57

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಎಸ್. ನಾರಾಯಣ್ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು 

ಎಸ್ ನಾರಾಯಣ್  ನಿರ್ದೇಶನದ ಪ್ರೊಡಕ್ಷನ್ ನಂ 1  ಚಿತ್ರ ಇತ್ತೀಚೆಗಷ್ಟೇ ಆರಂಭವಾಗಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ. ವಿಜಯ್ ಅವರು ಜೂನ್ 5 ರಿಂದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು ಮುಂತಾದ ಕಲಾವಿದರು ಅಭಿನಯದಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.
ನಿರ್ಮಾಪಕ ಕೆ.ಮಂಜು ಹಾಗೂ ರಮೇಶ್ ಯಾದವ್ ಜಂಟಿಯಾಗಿ ಈಶ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ  ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.  ಚಿತ್ರದ ಶೀರ್ಷಿಕೆ ಅದ್ದೂರಿಯಾಗಿ  ಅನಾವರಣಗೊಳಿಸಲು ತಂಡ ಸಿದ್ಧತೆ ನಡೆಸುತ್ತಿದೆ‌.
ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ನಾಯಕಿಯಗಿ ಬೃಂದಾ ನಟಿಸಲ್ಲಿದ್ದಾರೆ. ವಿಭಿನ್ನಪಾತ್ರದಲ್ಲಿ ಸಾಧುಕೋಕಿಲ  ಕಾಣಿಸಿಕೊಳ್ಳುತ್ತಿದ್ದಾರೆ. ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಕಲ್ಯಾಣಿ, ಗಿರಿ, ಜಯರಾಂ, ಸುಜಯ್ ಶಾಸ್ತ್ರಿ, ಮಂಜು ಪಾವಗಡ ಸೇರಿದಂತೆ ಅನುಭವಿ ಕಲಾವಿದರ ದೊಡ್ಡ ತಾರಾಬಳಗ ಈ ಚಿತ್ರದಲ್ಲಿದೆ.
ಎಸ್ ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಜೆ‌ಸ್ಸಿ ಗಿಫ್ಟ್ ಅವರ ಸಂಗೀತ ನಿರ್ದೇಶನವಿದೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಸಂತು ಅವರ ನೃತ್ಯ ನಿರ್ದೇಶನವಿರುವ ಪ್ರೊಡಕ್ಷನ್ ನಂ 1  ಚಿತ್ರದ ಪಿಆರ್ ಓ ಆಗಿ ಸುಧೀಂದ್ರ ವೆಂಕಟೇಶ್ ಕಾರ್ಯ ನಿರ್ವಹಿಸುತ್ತಿದ್ದಾರೆ.

Post a comment

No Reviews