2024-09-19 09:03:36

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿಎಂ ಸಿದ್ದರಾಮಯ್ಯ ದುರ್ಬಲ ಮುಖ್ಯಮಂತ್ರಿ: ಆರ್‌.ಅಶೋಕ್

ಭ್ರಷ್ಟಾಚಾರದಲ್ಲಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿರುವ ಸಚಿವರ ರಾಜಿನಾಮೆ ಪಡೆಯಲಾಗದಷ್ಟು ಸಿಎಂ ಸಿದ್ದರಾಮಯ್ಯ ದುರ್ಬಲರಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ ವ್ಯಂಗ್ಯವಾಡಿದ್ದಾರೆ.
ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿರುವ ಸಚಿವ ಬಿ.ನಾಗೇಂದ್ರ ಅವರ ರಾಜಿನಾಮೆ ಪಡೆಯುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ಡಿ.ಕೆ.ಶಿವಕುಮಾರ್‌ ಶುದ್ದ ಹಸ್ತರಲ್ಲ ಎಂದು 2013 ರಲ್ಲಿ ಒಂದು ವರ್ಷ ಸಂಪುಟದಿಂದ  ಸಿಎಂ ಸಿದ್ದರಾಮಯ್ಯ ಹೊರಗಿಟ್ಟಿದ್ದರು. ಆದರೆ ಇಂದು ಭ್ರಷ್ಟಾಚಾರದಲ್ಲಿ ನೇರವಾಗಿ ಸಿಕ್ಕಿಬಿದ್ದಿರುವ ಸಚಿವರ ರಾಜೀನಾಮೆ ಪಡೆಯಲಾಗದಷ್ಟು ದುರ್ಬಲರಾಗಿದ್ದಾರೆ ಎಂದು ಅಶೊಕ್‌ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಖಾತೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.
ನಿಮ್ಮ ಪರಿಸ್ಥಿತಿ ಕಂಡರೆ ಅಯ್ಯೋ ಎಂದು ಕನಿಕರ ಮೂಡುತ್ತಿದೆ. ಭ್ರಷ್ಟ ಸಚಿವರಿಂದ ಬ್ಲಾಕ್ ಮೇಲ್ ಮಾಡಿಸಿಕೊಂಡು ಕುರ್ಚಿ ಉಳಿಸಿಕೊಳ್ಳುವಂತಹ ದುರ್ಘತಿ ನಿಮಗೆ ಬರಬಾರದಿತ್ತು. ಕರ್ನಾಟಕದ ಅತ್ಯಂತ ವೀಕ್ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ಕುಖ್ಯಾತಿ ಪಡೆದುಕೊಳ್ಳುವ ಬದಲು ರಾಜೀನಾಮೆ ಕೊಟ್ಟು ಗೌರವದಿಂದ ನಿವೃತ್ತರಾಗಿ ಎಂದು ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

Post a comment

No Reviews