
ಬೆಂಗಳೂರರು: ಲೈಂಗಿಕ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅವಧಿ ಇಂದಿಗೆ (ಜೂ.10) ಮುಕ್ತಾಯಗೊಳ್ಳಲಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿ ಮತ್ತೆ ಎಸ್ಐಟಿ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾದ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧ ವಿಚಾರಣೆ ನಡೆಸಲು ಪ್ರಜ್ವಲ್ನನ್ನು ಜೂನ್ 10ರವರೆಗೆ ಎಸ್ಐಟಿ ವಶಕ್ಕೆ ಪಡೆದುಕೊಡಿತ್ತು. ಹಾಗಾಗಿ ಇಂದು ನ್ಯಾಯಾಲಯಕ್ಕೆ ಪ್ರಜ್ವಲ್ರನ್ನು ಹಾಜರುಪಡಿಸಲಿದೆ. ಹೊಳೆನರಸೀಪುರ ಪ್ರಕರಣ ಹೊರತುಪಡಿಸಿ ಇನ್ನೂ 3 ಪ್ರಕರಣದ ವಿಚಾರಣೆ ಬಾಕಿ ಉಳಿದಿದ್ದು, ಆ ಕುರಿತು ವಿಚಾರಣೆ ನಡೆಸುವ ಉದ್ದೇಶದಿಂದ ಮತ್ತೆ ಪ್ರಜ್ವಲ್ ನನ್ನು ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಎಸ್ಐಟಿ ಮನವಿ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
Poll (Public Option)

Post a comment
Log in to write reviews