2024-09-19 09:04:59

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಪ್ಪ-ಅಮ್ಮನ ಜಗಳ ಬಿಡಿಸಲು ಹೋಗಿ ಮಗ ಬಲಿ

ಬೆಂಗಳೂರು: ಅಪ್ಪ-ಅಮ್ಮನ ಜಗಳ ಬಿಡಿಸಲು ಹೋಗಿ ಮಗ ಆಕಸ್ಮಿಕವಾಗಿ ಕೊಲೆಯಾಗಿರುವ ಘಟನೆ ಬೆಂಗಳೂರಿನ ಜರಗನಹಳ್ಳಿಯಲ್ಲಿ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಅಜ್ಜಿಯನ್ನು ನೋಡಿಕೊಳ್ಳುವ ವಿಚಾರಕ್ಕೆ ಯಶವಂತ್‌ ತಂದೆ-ತಾಯಿಯ ನಡುವೆ ಜಗಳ ನಡೆಯುತ್ತಿತ್ತು.ಇದನ್ನು ಬಿಡಿಸಲು ಹೋದ ಮಗ ಯಶವಂತ್‌ ತಂದೆ ಕೈಯಿಂದಲೇ ಕೊಲೆಯಾಗಿದ್ದಾನೆ.
ಯಶವಂತ್‌ ಇನ್ಫೋಸಿಸ್ ಕಂಪನಿಯಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ. ತಂದೆ ಮಾಡಿದ್ದ ಸಾಲವನ್ನು ಈತನೇ ತೀರಿಸುತ್ತಿದ್ದ. ಈ ಮಧ್ಯೆ ಆತನ ಅಜ್ಜಿ ಹಾಸಿಗೆ ಹಿಡಿದಿದ್ದರು. ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ತಂದೆ-ತಾಯಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು.. ಇವತ್ತೂ ಕೂಡ ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದಿದ್ದ. ಆದರೆ, ಗಲಾಟೆ ನಡುವೆ ಅಚಾನಕ್ಕಾಗಿ ಕೈಯಲಿದ್ದ ಚಾಕು ಯಶವಂತ್‌ ಎದೆಗೆ ಚುಚ್ಚಿಕೊಂಡಿತು. ಚಾಕು ಎದೆಗೆ ಚುಚ್ಚಿದ್ದರಿಂದ ರಕ್ತಸ್ತ್ರಾವವಾಗಿ ಯಶವಂತ್‌ ಪ್ರಾಣ ಕಳೆದುಕೊಂಡಿದ್ದಾನೆ. ಸದ್ಯ ಆರೋಪಿ ತಂದೆ ಬಸವರಾಜುನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
 

Post a comment

No Reviews