2024-09-19 04:47:22

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಿತ್ತನೆ ಬೀಜದ ಬೆಲೆ ಶೇ.48.50ರಷ್ಟ ಏರಿಕೆ : ಕೃಷಿ ಇಲಾಖೆಯ ಸ್ಪಷ್ಟೀಕರಣ

2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ  ಕನಾ೯ಟಕದಲ್ಲಿ ಬೀಜಗಳ ದರ ಕಡಿಮೆ ಇದೆ. ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ APMC ಮಾರಾಟ ದರಗಳ  ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ ಗರಿಷ್ಠ ಶೇ. 59.58ರಷ್ಟು ವ್ಯತ್ಯಾಸವಿದೆ.

ಈ ಬಾರಿ ಹೆಸರು ಬೆಳೆಯ ಬಿತ್ತನೆ ಬೀಜಗಳ
ಏಪ್ರಿಲ್ 1ರ ಬಿತ್ತನೆ ಬಿಜದ ದರ  ಶೇ.48.5 ಹೆಸರು, ಶೇ.37.72 ಉದ್ದು, ಶೇ.28.29 ರಿಂದ 37.69ರಷ್ಟು ತೊಗರಿಯ ವಿವಿಧ ತಳಿಗಳು, ಮತ್ತ ಶೇ.7.66 ರಿಂದ ಶೇ.33.33ರಷ್ಟು ಜೋಳದ ದರವು ಹೆಚ್ಚಾಗಿರುತ್ತದೆ. ಬೀಜಗಳ ಖರೀದಿ ದರದಲ್ಲಿನ ಹೆಚ್ಚಳದ ಮೊತ್ತವು ಬೀಜೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾವಣೆಯಾಗಿರುತ್ತದೆ ಎನ್ನುವುದು ಗಮನಾರ್ಹ ಅಂಶವಾಗಿದೆ.
ಇದಲ್ಲದೆ ಕೆಲ ಬಿತ್ತನೆ ಬೀಜದ ದರದಲ್ಲಿ ಇಳಿಕೆ ಹಾಗೂ ಯಥಾಸ್ಥಿತಿ ಕೂಡ ಕಂಡುಬಂದಿದೆ. 2024ರ ಮುಂಗಾರು ಹಂಗಾಮಿನ ಸೋಯಾ, ಅವರೆ ಬಿತ್ತನೆ ಬೀಜದ ದರವು 2023ರ ಮುಂಗಾರು ಹಂಗಾಮಿನ ಏಪ್ರಿಲ್ 1ರ ದರಗಳ ಹೋಲಿಕೆಯಲ್ಲಿ ಶೇ.8ರಷ್ಟು ಕಡಿಮೆಯಾಗಿದೆ. ಸೂರ್ಯಕಾಂತಿ ಬಿತ್ತನೆ ಬೀಜದ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಕಳೆದ ಬರಿಯ ದರದಲ್ಲಿಯೇ ದೊರೆಯುತ್ತಿದೆ.
ಬಿ,ಟಿ ಹತ್ತಿ ಬಿತ್ತನೆ ಬೀಜವನ್ನ ರಾಜ್ಯ ಸರ್ಕಾರದ ಇಲಾಖಾ ವತಿಯಿಂದ ರಿಯಾಯತಿ ದರದಲ್ಲಿ ವಿತರಣೆ ಮಾಡುತ್ತಿಲ್ಲ. ಬಿ.ಟಿ. ಹತ್ತಿ ಬಿತ್ತನೆ ಬೀಜಗಳ ಗರಿಷ್ಠ ದರಗಳನ್ನು ಕೇಂದ್ರ ಸರ್ಕಾರದ ವತಿಯಿಂದಲೇ ನಿಗದಿಪಡಿಸಲಾಗಿದೆ. 
ಬಿತ್ತನೆ ಬೀಜದ ದರ 2023ಕ್ಕೆ ಹೋಲಿಸಿದರೆ ಈ ಬಾರಿ ಗರಿಷ್ಠ ಶೇ.48.50ರಷ್ಟಿ ಏರಿಕೆಯಾಗಿದೆ. ನೆರೆಯ ರಾಜ್ಯಗಳಲ್ಲಿನ ಪ್ರಸಕ್ತ ಸಾಲಿನ ಬಿತ್ತನೆ ಬೀಜಗಳ ದರಗಳಿಗೆ ಹೋಲಿಸಿದರೆ ರಾಜ್ಯದಲ್ಲಿನ ಬಿತ್ತನೆ ಬೀಜದ ದರ ಕಡಿಮೆ ಇದೆ. 
ಉದಾಹರಣೆಗೆ ಏಪ್ರಿಲ್‌-1 ದರವು ಮಹಾರಾಷ್ಟ್ರದಲ್ಲಿ ಸೋಯಾ,ಅವರೆ ಬೀಜದ ಬೆಲೆ ಪ್ರತಿ ಕ್ವಿಂಟಾಲ್‌ಗೆ 8500/- ರೂ ,ಕರ್ನಾಟಕದಲ್ಲಿ ಇದು.7270/- ರೂ ಇದೆ. ಅದೇ ರೀತಿ, ತೊಗರಿ ಬೆಳೆಗೆ ಮಹಾರಾಷ್ಟ್ರದಲ್ಲಿ ಪ್ರತಿ ಕ್ವಿಂಟಾಲ್‌ಗೆ 25,000/- ರೂ ಇದ್ದು ಕರ್ನಾಟಕದಲ್ಲಿ ಪ್ರತಿ ಕ್ವಿಂಟಾಲ್‌ಗೆ 17,900/- ರೂ ನಿಗದಿಪಡಿಸಲಾಗಿದೆ. ಹೆಸರು ಮತ್ತು ಜೋಳದ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಮಹಾರಾಷ್ಟ್ರದಲ್ಲಿ ಕ್ರಮವಾಗಿ 23,500/- ರೂ, 14,000/- ರೂಗಳಿದೆ. ಕರ್ನಾಟಕದಲ್ಲಿ ಕ್ರಮವಾಗಿ 18,600/-ರೂ,12,500/- ರೂ ನಿಗದಿಪಡಿಸಲಾಗಿದೆ. ಈ ಹೋಲಿಕೆಯಲ್ಲಿ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ದರಗಳು ಗಣನೀಯವಾಗಿ ಕಡಿಮೆ ಇರುವುದು ಕಂಡುಬರುತ್ತಿದೆ. ಕೃಷಿ ಇಲಾಖೆಯು ಸ್ಪಷ್ಟೀಕರಣ ನೀಡಿ ವಾಸ್ತವ ಸ್ಥಿತಿಯನ್ನು ತಿಳಿಸಿದ್ದಾರೆ.
 

Post a comment

No Reviews