
ರಾಮನಾಥಪುರಂ : ಅಂತಾರಾಷ್ಟ್ರೀಯ ಕಡಲ ಗಡಿ ರೇಖೆ ಉಲ್ಲಂಘಿಸಿದ ಆರೋಪದ ಮೇಲೆ ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಪಂಬನ್ನ ಸುಮಾರು 35 ಮೀನುಗಾರರನ್ನು ಶ್ರೀಲಂಕಾ ನೌಕಪಡೆ ಬಂಧಿಸಿದೆ.
ಪಂಬನ್ ಮೀನುಗಾರರು, ಮೀನುಗಾರಿಕೆಗೆ ಬಳಸುತ್ತಿದ್ದ 4 ದೇಶದ ದೋಣಿಗಳನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಲಂಕಾದ ವಾಯವ್ಯ ಸಮುದ್ರದಲ್ಲಿ ಮನ್ನಾರ್ನ ದಕ್ಷಿಣಕ್ಕೆ ಲಂಕಾದ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಮೀನುಗಾರರನ್ನು ಲಂಕಾ ನೌಕಾಪಡೆ ಬಂಧಿಸಿದೆ. ನಂತರ ಕಲ್ಪಿಟಿಯ ಮೀನುಗಾರಿಕಾ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಈ ಹಿಂದೆ ಬಂಧಿತರಾಗಿದ್ದ 13 ಮೀನುಗಾರರನ್ನು ಬಿಡುಗಡೆ ಮಾಡುವಂತೆ ಶ್ರೀಲಂಕಾ ನ್ಯಾಯಾಲಯ ಆದೇಶ ನೀಡಿದ ಹಿನ್ನೆಲೆಯಲ್ಲಿ ಈ ಬಂಧನ ನಡೆದಿದೆ.
ಬಂಧನವನ್ನು ಖಂಡಿಸಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ, ಪದೇ ಪದೇ ಮೀನುಗಾರರ ಬಂಧನಕ್ಕೆ ಶಾಶ್ವತ ಪರಿಹಾರವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಈ ವಿಚಾರದಲ್ಲಿ ಕೇಂದ್ರದ ಮೇಲೆ ಒತ್ತಡ ಹೇರದ ಡಿಎಂಕೆ ಸರ್ಕಾರವನ್ನು ಅವರು ತರಾಟೆಗೆ ತೆಗೆದುಕೊಂಡರು.
Poll (Public Option)

Post a comment
Log in to write reviews