
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಸುಮಾರು 30ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಮುಂಬಾಳು ಕ್ರಾಸ್ ಬಳಿ ಭಾನುವಾರ (ಜೂನ್ 9) ನಡೆದಿದೆ.
ಜೆಆರ್ಬಿ ಹೆಸರಿನ ಖಾಸಗಿ ಬಸ್ ಪಲ್ಟಿಯಾಗಿದ್ದು ಸಾಗರದಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಗಾಯಾಳುಗಳನ್ನ ಸಮೀಪದ ಆನಂದಪುರ ಹಾಗೂ ಸಾಗರದ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಜಾಗರೂಕ ಚಾಲನೆಯಿಂದ ಈ ಅವಘಡ ಸಂಭವಿಸಿದೆ. ಘಟನೆ ವೇಳೆ ಮಳೆ ಬರುತ್ತಿದ್ದ ಕಾರಣ ವಾಹನ ಚಲಾಯಿಸಲು ಚಾಲಕ ಕಷ್ಟ ಪಡುತ್ತಿದ್ದು ಹಠಾತ್ ಬ್ರೇಕ್ ಹಾಕಿದ್ದರ ಪರಿಣಾಮ ಬಸ್ ಪಲ್ಟಿಯಾಗಿದೆ. ಮಾಹಿತಿ ತಿಳಿದ ತಕ್ಷಣ ಇನ್ ಪೆಕ್ಟರ್ ನಾಗರಾಜ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Poll (Public Option)

Post a comment
Log in to write reviews