2024-09-19 04:46:54

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತದಲ್ಲಿ ಮೃತ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ ಘಟನೆಯಲ್ಲಿ ಮೃತರಾದ ಕುಟುಂಬಕ್ಕೆ  20 ಲಕ್ಷ ಮತ್ತು ಗಾಯಗೊಂಡವರಿಗೆ 3 ಲಕ್ಷ ಪರಿಹಾರವನ್ನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಟರ್ಮಿನಲ್-1 ಮೇಲ್ಛಾವಣಿಯ ಒಂದು ಭಾಗ ಇಂದು (ಜೂನ್ 28 ಶುಕ್ರವಾರ) ಬೆಳಗ್ಗೆ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. 6 ಮಂದಿಗೆ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಭೇಟಿ ನೀಡಿ ಪರಿಶೀಲಿಸಿ ಮಾದ್ಯಮಗಳೊಂದಿಗೆ ಮಾತಾನಾಡಿದರು.
ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ ಘಟನೆಯಲ್ಲಿ ಮೃತರಾದ ಕುಟುಂಬಕ್ಕೆ 20 ಲಕ್ಷ ಮತ್ತು ಗಾಯಗೊಂಡವರಿಗೆ 3 ಲಕ್ಷ ಪರಿಹಾರವನ್ನ ಒದಗಿಸಲಾಗುವುದು ಹಾಗೂ ದೆಹಲಿ ವಿಮಾನ ನಿಲ್ದಾಣ ಮತ್ತು ದೇಶಾದ್ಯಂತ ಅಂತಹ ರಚನೆಗಳನ್ನು ಹೊಂದಿರುವ ಇತರ ವಿಮಾನ ನಿಲ್ದಾಣಗಳಲ್ಲಿನ ರಚನೆಯನ್ನು ಕೂಲಂಕುಷವಾಗಿ ಪರಿಶೀಲಿಸಲಾಗುವುದು ಎಂದು ಸಚಿವರು ತಿಳೀಸಿದರು.

Post a comment

No Reviews