2024-09-20 02:55:01

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ತಿರುಪತಿ ಲಡ್ಡುಗಳಲ್ಲಿ ತೀವ್ರ ಸಂಚಲನ ಮೂಡಿಸಿದ ಪ್ರಾಣಿಗಳ ಕೊಬ್ಬು ಬಳಕೆ

ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡುರವರು ತಿರುಪತಿ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾಗುವ ಲಡ್ಡುಗಳಲ್ಲಿ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಪ್ರಾಣಿಗಳ ಕೊಬ್ಬು ಬಳಸಿತ್ತು ಎಂದು ಗಂಭೀರ ಆರೋಪ ಮಾಡಿದ್ದಾರೆ ಎನ್ನಲಾಗಿದೆ.

ಟಿಡಿಪಿ ನೇತೃತ್ವದ ಸರ್ಕಾರ ಕಳೆದ ಚುನಾವಣೆಯಲ್ಲಿ ಜನಸೇನಾ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿತ್ತು. ಚಂದ್ರಬಾಬು ನಾಯ್ಡು ಅವರು ಹಿಂದಿನ ಸರ್ಕಾರದ ವಿರುದ್ಧ ಬುಧವಾರ ನಡೆದ ಎನ್ ಡಿಎ ಪಕ್ಷದ ಸಭೆಯಲ್ಲಿ ಈ ಗಂಭೀರ ಆರೋಪ ಮಾಡಿದ್ದಾರೆ. ಆದರೆ, ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಆರೋಪವನ್ನು ಕಟುವಾಗಿ ತಳ್ಳಿಹಾಕಿದೆ.

ಈ ಆರೋಪಗಳನ್ನು ವೈಎಸ್ಆರ್ ಕಾಂಗ್ರೆಸ್ ಪಕ್ಷವು ನಿರಾಕರಿಸಿದೆ ಮತ್ತು ಅವುಗಳನ್ನು ಆಧಾರ ರಹಿತ ಮತ್ತು ದುರುದ್ದೇಶಪೂರಿತ ಎಂದು ಕರೆದಿದೆ. ತಿರುಮಲ ದೇವಸ್ಥಾನದ ಪಾವಿತ್ರ್ಯತೆ ಮತ್ತು ಆಡಳಿತದ ಬಗ್ಗೆ ಈ ನಿಲುವು ಚರ್ಚೆಯನ್ನು ಹುಟ್ಟುಹಾಕಿದೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರು ಕಳೆದ 5 ವರ್ಷಗಳಲ್ಲಿ ತಿರುಮಲದ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಸಿಎಂ ನಾಯ್ಡು ಹೇಳಿದ್ದಾರೆ.

ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಿದ್ದರು, ದೇವಸ್ಥಾನದ ಪಾವಿತ್ರ್ಯತೆ ಕಾಪಾಡಲು ಪ್ರಯತ್ನಿಸುತ್ತಿದ್ದೇವೆ, ದೇವಾಲಯದ ಸಂಪ್ರದಾಯಗಳನ್ನು ಮರುಸ್ಥಾಪಿಸುವುದರ ಜೊತೆಗೆ, ದೇವಾಲಯವನ್ನು ಉಳಿಸಿಕೊಳ್ಳಲು ಸರ್ಕಾರವು ಪ್ರಯತ್ನಿಸುತ್ತಿದೆ ಎಂದರು.

ಈ ಆರೋಪಗಳ ನಡುವೆ, ಹಿರಿಯ ವೈಎಸ್‌ಆರ್ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ವೈವಿ ಸುಬ್ಬಾ ರೆಡ್ಡಿ ಅವರು ನಾಯ್ಡು ಅವರ ಹೇಳಿಕೆಯನ್ನು ದೇವಾಲಯದ ಪವಿತ್ರತೆ ಮತ್ತು ಅಸಂಖ್ಯಾತ ಹಿಂದೂಗಳ ನಂಬಿಕೆಯ ಮೇಲಿನ ದಾಳಿ ಎಂದು ಬಣ್ಣಿಸಿದ್ದಾರೆ.

ನಾಯ್ಡು ಅವರು ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಭಾವನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ರೆಡ್ಡಿ ಆರೋಪಿಸಿದರು. ರಾಜಕೀಯ ಲಾಭಕ್ಕಾಗಿ ಚಂದ್ರಬಾಬು ನಾಯ್ಡು ಯಾವ ಮಟ್ಟಕ್ಕೆ ಇಳಿಯುತ್ತಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದಿದ್ದಾರೆ.

Post a comment

No Reviews