2024-09-19 05:04:08

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಗಾಂಜಾ ಸಾಗಾಟನೆ ವೇಳೆ ಸಿಕ್ಕಿಬಿದ್ದ ಕಳ್ಳರು : 15 ಕೋಟಿ ರೂ ವಶಕ್ಕೆ

ಬೀದರ್ ಜಿಲ್ಲೆಯ ಮಹಾರಾಷ್ಟ್ರ ಗಡಿ ಭಾಗದ ವನಮಾರಪಳ್ಳಿ ಬಳಿ  15 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಎನ್.ಸಿ.ಬಿ ತಂಡ ಮತ್ತು ಜಿಲ್ಲಾ ಪೊಲೀಸ್ ಜಂಟಿ ಕಾರ್ಯಚಾರಣೆ ನಡೆಸಿ ಗಾಂಜಾ ಸಾಗಣೆ ಮಾಡುತ್ತಿದ್ದ ಲಾರಿ ವಶಪಡಿಸಿಕೊಂಡಿದ್ದಾರೆ.

ಓಡಿಶಾ ರಾಜ್ಯದ ಮಲ್ಕಾನ್ಗಿರಿ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಗಾಂಜಾ ತುಂಬಿಕೊಂಡು ಮಹಾರಾಷ್ಟ್ರಕ್ಕೆ ಸಾಗಿಸುತ್ತಿರುವ ಲಾರಿಯನ್ನು ಖಚಿತ ಮಾಹಿತಿ ಮೇರೆಗೆ ಎನ್.ಸಿ.ಬಿ ಬೆಂಗಳೂರು ತಂಡ ಹಿಂಬಾಲಿಸಿದ್ದು, ವನಮಾರಪಳ್ಳಿ ಬಳಿ ಸಿಪಿಐ ರಘುವೀರಸಿಂಗ್  ಲಾರಿ ವಶಪಡಿಸಿಕೊಂಡಿದ್ದಾರೆ.

ಲಾರಿ ಜೊತೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಔರಾದ್ ಠಾಣೆಗೆ ಕರೆತಂದು ಪರಿಶೀಲನೆ ಮಾಡಿದಾಗ ಲಾರಿ ಮೇಲೆ ಸಿಮೆಂಟ್ ಇಟ್ಟಿಗೆ ತುಂಬಿದ್ದು, ಒಳಗಡೆ ಗಾಂಜಾ ಪ್ಯಾಕೇಟ್ ಗಳನ್ನು ಅಡಗಿಸಿಟ್ಟಿದ್ದು ಸಿಕ್ಕಿಬಿದ್ದಿದೆ.

ಪ್ರಕರಣದಲ್ಲಿ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಂದಿಕೇರಾ ಗ್ರಾಮದ ಇಬ್ಬರನ್ನು ಬಂಧಿಸಲಾಗಿದೆ. ಬೆಂಗಳೂರು ಎನ್.ಸಿ.ಬಿ  ತಂಡ ಜಪ್ತಿಯಲ್ಲಿ 1500 ಕೆಜಿ ಗಾಂಜಾ ಹಾಗು  ಅಂದಾಜು 15 ಕೋಟಿ ರೂ ವಶಪಡಿಸಿಕೊಂಡಿದೆ.

Post a comment

No Reviews