
ರಾಜ್ಯದಲ್ಲಿ ಮೇ 07 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಈಗಾಗಲೇ 28 ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿವೆ,
ಮೋದಿ, ಅಮಿತ್ ಶಾ ಸೇರಿದಂತೆ ಹಲವು ಘಟಾನುಘಟಿ ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದಾರೆ. ಅದರಂತೆ ಇಂದು ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದರು, ಇದೀಗ ಮೋದಿ ಪ್ರಚಾರದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮಧ್ಯಾಹ್ನ 3.20ಕ್ಕೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ
ಕರ್ನಾಟಕದಲ್ಲಿ ಎಲ್ಲೆಲ್ಲಿ ಪ್ರಚಾರ?
ಅಮಿತ್ ಶಾ ಅವರು ಇಂದು(ಬುಧವಾರ) ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಮತಯಾಚನೆ ಮಾಡಲಿದ್ದಾರೆ. ಅಮಿತ್ ಶಾ ಅವರು ರಾಣೆಬೆನ್ನೂರಿನ ಕುರಬಗಿರಿ ಕ್ರಾಸ್ನಿಂದ ಅಶೋಕ ಸರ್ಕಲ್ವರೆಗೆ ಬೃಹತ್ ರೋಡ್ಶೋ ನಡೆಸಲಿದ್ದಾರೆ. ರೋಡ್ ಶೋ ಬಳಿಕ ಹುಬ್ಬಳ್ಳಿಗೆ ತೆರಳಲಿರುವ ಅಮಿತ್ ಶಾ ಅವರು ಸಂಜೆ 5.45ಕ್ಕೆ ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಸಿ ಪ್ರಹ್ಲಾದ್ ಜೋಶಿ ಪರ ಮತಬೇಟೆ ನಡೆಸಲಿದ್ದಾರೆ
Poll (Public Option)

Post a comment
Log in to write reviews