2024-09-19 05:00:41

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಿಆರ್​ಟಿಯಲ್ಲಿ ಎರಡು ಆನೆ ಕಳೇಬರ ಪತ್ತೆ

ಚಾಮರಾಜನಗರ: ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ (ಬಿಆರ್​ಟಿ) ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಬೈಲೂರು ವನ್ಯಜೀವಿ ವಲಯ ಮತ್ತು ಯಳಂದೂರು ವನ್ಯಜೀವಿ ವಲಯ ವಿಭಾಗದಲ್ಲಿ ಎರಡು ಆನೆ ಕಳೇಬರಗಳು ಪತ್ತೆಯಾಗಿವೆ.

ಬೈಲೂರು ವಲಯದ ಆಳದ ಕೆರೆಯ ಬಳಿ 45-50 ವರ್ಷದ ಗಂಡಾನೆ ಕಳೇಬರ ಪತ್ತೆಯಾಗಿದ್ದು, 7-8 ತಿಂಗಳ ಹಿಂದೆ ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯಳಂದೂರು ವಲಯದ ಬೇತಾಳಕಟ್ಟೆ ಎಂಬಲ್ಲಿ ಮತ್ತೊಂದು ಗಂಡಾನೆ ಆನೆ ಕಳೇಬರ ಪತ್ತೆಯಾಗಿದ್ದು, ಇದು 20-40 ದಿನಗಳ ಹಿಂದೆ ಮೃತಪಟ್ಟಿರಿಬಹುದು ಎಂದು ಅಂದಾಜು ಮಾಡಲಾಗಿದೆ. ಎರಡು ಆನೆಗಳ ದಂತಗಳು ಸುರಕ್ಷಿತವಾಗಿದ್ದು, ಅರಣ್ಯ ಇಲಾಖೆ ಮುಂದಿನ ಕ್ರಮ ಕೈಗೊಂಡಿದೆ.

ಇನ್ನು, ಆನೆ ಕಳೇಬರ ಬಹಳ ತಡವಾಗಿ ಪತ್ತೆ ಆಗಿರುವ ಬಗ್ಗೆ ಪರಿಸರ ಹೋರಾಟಗಾರ ಜೋಸೆಫ್ ಹೂವರ್ ಕಿಡಿಕಾರಿದ್ದು, ಒಂದಾನೇ ಮೃತಪಟ್ಟು 7-8 ತಿಂಗಳು, ಇನ್ನೊಂದಾನೆ ಸತ್ತು 20-40 ದಿನಗಳಾಗಿದೆ. ಇದು ಅರಣ್ಯ ಇಲಾಖೆಯ ಗಸ್ತಿನ ವೈಖರಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Post a comment

No Reviews