2024-09-19 04:57:56

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಾಲ್ಮೀಕಿ ನಿಗಮ ಅಕ್ರಮ : ಮತ್ತೋರ್ವ ಕೈ ಸಚಿವನ ಮೇಲೆ ತೂಗುಗತ್ತಿ..!

ಬೆಂಗಳೂರು : ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಲಭಿಸಿದ್ದು, ಈ ಪ್ರಕರಣದಲ್ಲಿ ಸಾಕ್ಷಿಗಳನ್ನು ನಾಶ ಮಾಡಲು ಕಾಂಗ್ರೆಸ್ ಸಚಿವ  ಶರಣ ಪ್ರಕಾಶ್ ಪಾಟೀಲ್ ಭಾಗಿಯಾಗಿದ್ದಾರೆ ಎಂಬ ಅನುಮಾನ ಮೂಡಿದೆ. 

ಈಗಾಗಲೇ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ  ನಾಗೇಂದ್ರ ಅವರು ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ  ಶರಣ ಪ್ರಕಾಶ್ ಪಾಟೀಲ್ ಮೇಲೆಯೂ ಗಂಭೀರ ಆರೋಪ ಕೇಳಿ ಬಂದಿರುವುದು,  ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದೆ. 

ಈ ಕುರಿತು ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿರುವ ರಾಜ್ಯ ಬಿಜೆಪಿ, ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ  ಸಿದ್ದರಾಮಯ್ಯ ಆದಿಯಾಗಿ ಕಾಂಗ್ರೆಸ್ಸಿನ ಬಹುತೇಕ ನಾಯಕರು ಸೇರಿಕೊಂಡು ಮಾಡಿರುವ ಮಹಾನ್ ಭ್ರಷ್ಟಾಚಾರ. ಈ ಪ್ರಕರಣದ 8 ನೇ ಆರೋಪಿ, ಎಸ್ಐಟಿ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲವೆಂದು,
1. ತನ್ನ ಮೊಬೈಲ್ನಲ್ಲಿ ನಿಗಮದ ಅಧ್ಯಕ್ಷರಾದ ಬಸವರಾಜ್ ದದ್ದಲ್ ಜೊತೆ ನಡೆಸಿರುವ ಸಂಭಾಷಣೆಯನ್ನು SIT ವಶಪಡಿಸಿಕೊಂಡಿದ್ದು ಅದನ್ನು ನಾಶ ಮಾಡುವ ಸಂಭವವಿರುತ್ತದೆ. ಹಾಗಾಗಿ ಅದರ ಒಂದು ಪ್ರತಿಯನ್ನು ಕೋರ್ಟ್ ಪಡೆದುಕೊಳ್ಳಬೇಕು.
2. ಸಚಿವರಾದ ಶ್ರೀ ಶರಣ ಪ್ರಕಾಶ್ ಪಾಟೀಲ್ ಅವರ ಕಾರ್ಯಾಲಯದ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಯೂನಿಯನ್ ಬ್ಯಾಂಕಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ನಾಶ ಮಾಡುವ ಸಂಭವವಿದ್ದು ಅವುಗಳನ್ನು ಕೂಡ ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ಕೋರ್ಟಿನಲ್ಲಿ ಮನವಿ ಮಾಡಿರುತ್ತಾರೆ. ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಭಾಗಿಯಾಗಿರುವ ಈ ಒಂದು ಹಗರಣವನ್ನು ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸುವುದು ಅಸಾಧ್ಯ, ಆದಕಾರಣ ಸಿದ್ದರಾಮಯ್ಯನವರು ಈ ಪ್ರಕರಣವನ್ನು ಸಿಬಿಐಗೆ ವಹಿಸಿ ತಾವು ಕೂಡ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಬಿಜೆಪಿ ಆಗ್ರಹಿಸುತ್ತದೆ ಎಂದು ಆಗ್ರಹಿಸಿದೆ.

Post a comment

No Reviews