2024-09-19 05:06:49

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಿಎಂ ಕೂಡ ಭಾಗಿ, ತನಿಖೆಯನ್ನ ಸಿಬಿಐಗೆ ವಹಿಸಿ: ಬಸನಗೌಡ ಯತ್ನಾಳ್ 

ವಿಜಯಪುರ: ಯಾವುದೇ ಪಕ್ಷ ಅಧಿಕಾರಕ್ಕೆ ಬಂದಿರಲಿ, ಮುಖ್ಯಮಂತ್ರಿಯನ್ನು ಪಕ್ಷದ ವರಿಷ್ಠರು, ಹೈಕಮಾಂಡ್ ಆಯ್ಕೆ ಮಾಡುತ್ತದೆ, ಅದು ಸ್ವಾಮೀಜಿಗಳ ಕೆಲಸವಲ್ಲ,ಅವರದು ಧರ್ಮದ ಕೆಲಸ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. 
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಹಗರಣದಲ್ಲಿ ಕೇವಲ ಬಿ ನಾಗೇಂದ್ರ ರಾಜೀನಾಮೆ ನೀಡಿದರೆ ಸಾಲದು. ಯಾಕೆಂದರೆ ಈ ದುರ್ವ್ಯವಹಾರ ಹಣಕಾಸು ಸಚಿವರೂ ಅಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ಬಾರದೆ ನಡೆದಿರುವುದಿಲ್ಲ, ಅವರೂ ಇದಕ್ಕೆ ಹೊಣೆಗಾರರು, ಆ 187ಕೋಟಿ ರೂ. ತೆಲಂಗಾಣದ ಬಾರ್ ಗಳಲ್ಲಿ ಖರ್ಚಾಗಿದೆ, ಅಲ್ಲಿನ ಚಿನ್ನಾಭರಣಗಳ ಅಂಗಡಿಗಳಿಗೆ ಹೋಗಿದೆ ಎಂದು ಯತ್ನಾಳ್ ಹೇಳಿದರು. ವಾಲ್ಮೀಕಿ ನಿಗಮ ಹಗರಣದ ಲಿಂಕ್ ದೆಹಲಿವರೆಗೂ ಇದೆ, ಹಾಗಾಗಿ ಇದರ ತನಿಖೆಯನ್ನು ಸಿಬಿಐಗೆ ವಹಿಸಿಕೊಡಬೇಕೆಂದು ತಾನು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಆಗ್ರಹಿಸುತ್ತೇನೆ ಎಂದು ಅವರು ಹೇಳಿದರು. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟಿದ್ದ ಹಣದ ಲೂಟಿಯಾಗಿದ್ದರೂ ಈ ಪಂಗಡವನ್ನು ಪ್ರತಿನಿಧಿಸುವ ಮಂತ್ರಿಗಳು ಶಾಸಕರು ಯಾಕೆ ಬಾಯಿಮುಚ್ಚಿಕೊಂಡು ಕುಳಿತಿದ್ದಾರೆ ಅಂತ ಅರ್ಥವಾಗಲ್ಲ ಎಂದು ಯತ್ನಾಳ್ ಪ್ರಶ್ನಿಸಿದರು.
 

Post a comment

No Reviews