2024-09-19 04:38:28

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಿಜಯಪುರ: ಐದು ವರ್ಷದ ಬಾಲಕನ ಮೇಲೆ ಶಾಲಾ ಬಸ್‌ ಹರಿದು ಬಾಲಕ ಸಾವು

ವಿಜಯಪುರ: ಅಂಗನವಾಡಿಗೆ ತೆರಳುತ್ತಿದ್ದ ಬಾಲಕನ ಮೇಲೆ ಖಾಸಗಿ ಶಾಲಾ ಬಸ್‌ ಹರಿದ ಪರಿಣಾಮ ಬಾಲಕ ಮೃತಪಟ್ಟ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದಲ್ಲಿ ಮಂಗಳವಾರ (ಆಗಸ್ಟ್‌ 06) ನಡೆದಿದೆ.
‌ಮೃತ ಬಾಲಕ ಅರಳದಿನ್ನಿ ಗ್ರಾಮದ ಬಸವರಾಜ (5 ವರ್ಷ) ಎಂದು ತಿಳಿದು ಬಂದಿದೆ.  ಅಂಗನವಾಡಿಗೆ ತೆರಳಲು ರಸ್ತೆ ದಾಟುವ ವೇಳೆ ಈ ದುರ್ಘಟನೆ ಸಂಭವಿಸಿದ್ದು. ಘಟನೆಯಲ್ಲಿ ಪುಟ್ಟ ಮಗನ ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆಯಿಂದ ಗ್ರಾಮದಲ್ಲಿ ಶೋಕ ಆವರಿಸಿದೆ.

ಅಪಘಾತಕ್ಕೆ ಚಾಲಕನ ಅಜಾಗರೂಕತೆಯೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಚಾಲಕ ಲೈಸೆನ್ಸ್‌ ಹೊಂದಿರುವ ಬಗ್ಗೆ ಪರಿಶೀಲಿಸಬೇಕು. ಇಂತಹ ಘಟನೆಗಳು ಮರುಕಳಿಸಬಾರದು. ನುರಿತ ವಾಹನ ಚಾಲಕರನ್ನು ಶಾಲೆಯವರು ನೇಮಿಸಿಕೊಳ್ಳಬೇಕು. ಬಾಲಕನ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಿ, ನ್ಯಾಯ ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ಈ ಬಗ್ಗೆ ನಿಡಗುಂದಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Post a comment

No Reviews