2024-09-19 09:15:57

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಎಲ್ಲಮ್ಮನಗರದಲ್ಲಿ ಮತದಾನ ಬಹಿಷ್ಕರಣೆ : ದಾವಣಗೆರೆ

ಮೂಲಭೂತ ಸೌಕರ್ಯಗಳಿಲ್ಲವೆಂದು ಮತದಾನ ಬಹಿಷ್ಕರಿಸಿರುವ ಘಟನೆ ದಾವಣಗೆರೆ ಕ್ಷೇತ್ರ ವ್ಯಾಪ್ತಿಯ ಎಲ್ಲಮ್ಮನಗರದಲ್ಲಿ ನಡೆದಿದೆ.

ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಯ ಭಾಗವಾಗಿ ಇಂದು 14 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಜನರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಆದರೆ ದಾವಣಗೆರೆ ಕ್ಷೇತ್ರದ ವ್ಯಾಪ್ತಿಯ ಎಲ್ಲಮ್ಮನಗರ ಮತಗಟ್ಟೆಯ ಜನರು ಮತದಾನ ಬಹಿಷ್ಕರಿಸಿದ್ದಾರೆ.

ಇಲ್ಲಿಯ ಲೋಕಿಕೆರೆ ಗ್ರಾಮ‌ ಪಂಚಾಯತಿ ವ್ಯಾಪ್ತಿಯ ಎಲ್ಲಮ್ಮನಗರದಲ್ಲಿ ಒಟ್ಟು 500 ಮತದಾರರಿದ್ದಾರೆ. ಆದರೂ ಗ್ರಾಮಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ನೀಡಿಲ್ಲ. ಹೀಗಾಗಿ ಆಕ್ರೋಶಗೊಂಡ ಜನರು ಮತದಾನದಿಂದ ಹಿಂದೆ ಸರಿದಿದ್ದಾರೆ. ಮತದಾನ ಬಹಿಷ್ಕರಿಸಿದ ಗ್ರಾಮಸ್ಥರನ್ನು ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ಮನವೊಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ.

Post a comment

No Reviews