2024-09-19 09:03:41

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಜೈದಾನ್ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ಮೊಹಮದ್ ಜೈದಾನ್ ಎಂಬ ವ್ಯಕ್ತಿ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ತಲಾ 50 ಸಾವಿರ ರೂ. ದಂಡ ಮತ್ತು ಜೀವಾವಧಿ ಶಿಕ್ಷೆ ನೀಡಿದೆ.

2021 ರಲ್ಲಿ ಶಿವಮೊಗ್ಗ ಟೌನ್ ವಾದಿ-ಎ-ಹುದಾ ವಾಸಿ ಮಹಮ್ಮದ್ ಜೈದಾನ್ ಮತ್ತು ಶಿವಮೊಗ್ಗ ಟೌನ್ ಲಕ್ಷರ್ ಮೊಹಲ್ಲಾದ ವಾಸಿ ನಕೀ ಅಲಿ ಇಬ್ಬರ ನಡುವೆ ಕ್ಲುಲಕ ಕಾರಣಕ್ಕೆ  ಜಗಳವಾಗಿತ್ತು. ಈ ಹಿನ್ನಲೆ ಜೈದಾನ್ ನ ತಂದೆ ನಜೀರ್ ಅಹಮದ್ ಅವರು ಮಗನ ರಕ್ಷಣೆಗಾಗಿ ಬಾಪೂಜಿ ನಗರದಿಂದ ವಾದಿ ಎ ಹುದಾ ಬಡಾವಣೆಗೆ ಸ್ಥಳಾಂತರಗೊಂಡಿದ್ದರು.

ಆದರೆ ಆರೋಪಿಗಳು 2021 ನೇ ಇಸವಿಯ  ಅಕ್ಟೊಬರ್ 29   ರಂದು ರಾತ್ರಿ ಶಿವಮೊಗ್ಗ ಟೌನ್  ಬಳಿ ಅಟ್ಯಾಕ್ ಮಾಡಿದ್ದರು . ಮತ್ತು ಮಹಮ್ಮದ್ ಅಬು ಸ್ವಲೇಹ ಇಬ್ಬರೂ ಸೇರಿಕೊಂಡು ಮಹಮ್ಮದ್ ಜೈದಾನ್ ನ ಮೇಲೆ ಹರಿತವಾದ ಆಯುಧಗಳಿಂದ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿದ್ದರು.

ಈ ಬಗ್ಗೆ ಮೃತನ ತಂದೆ ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದಲ್ಲಿ ಆಗಿನ ತನಿಕಾಧಿಕಾರಿಗಳಾದ  ದೀಪಕ್ ಎಂ.ಎಸ್, ಪೊಲೀಸ್ ನಿರೀಕ್ಷಕರು, ತುಂಗಾನಗರ ಪೊಲೀಸ್ ಠಾಣೆ ರವರು ಪ್ರಕರಣದ ತನಿಖೆ ಪೂರೈಸಿ ಆರೋಪಿತರ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

 

Post a comment

No Reviews